ಸಾಧುರಿಗೊಂದಿಸುವೇ ನಿತ್ಯದಿ ದಿವ್ಯ

ಸಾಧುರಿಗೊಂದಿಸುವೇ ನಿತ್ಯದಿ ದಿವ್ಯ
ಸಾಧುರಿಗೊಂದಿಸುವೇ                                      ||ಪ||

ಬೇಧವನಳಿಯದಾತ್ಮ ಭೋದವ ತಿಳಿಯಿತಾ
ಕ್ರೋಧಾದಿಗಳ ಸುಟ್ಟು ಮೋದದಿಂದಿರುವಂಥ         ||೧||

ಕಾಲಕರ್ಮವ ತುಳಿದು ಕಾಲಿಲೆ ಒದ್ದು
ಮೂಲ ಮಾಯಮನಳಿದು
ಆಲಿಗಳ ಬಲದಲ್ಲಿ ಬ್ರಹ್ಮನ
ಸಾಲು ಜ್ಯೋತಿಯ ಬೆಳಕಿನಿಂದಲಿ
ಮಾಲಿನೊಳಿಹ ಮೇಲು ಮೂರ್ತಿಯ
ಕೀಲವನು ಬಲ್ಲಂಥ ಮಹಿಮದ                            ||೨||

ಕ್ಲೇಶಪಾಶ ಕೆಡಿಸಿ ಮಾಯಾಂಗನೆಯಾ
ಆಸೆ ಎಲ್ಲವ ಬಿಡಿಸಿ
ದೋಷಭವದುರಿತನಾಶಾ
ಶಿಶುನಾಳೇಶನೊಳು ಮನ ಮುಳುಗಿ ನಿತ್ಯದಿ
ರಾಶಿ ತಾಪವ ತೊಳೆದು
ಕರ್ಮ ವಿವಶರೆನಿಸುವ ಭಾಸುರಾಗಿಹ                   ||೩||   
                        * * *
-ಶಿಶುನಾಳ ಶರೀಫ

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ