ಬಾಯಿಲೆ ಬ್ರಹ್ಮವ ಬೊಗಳಿದರೇನೋ

ಬಾಯಿಲೆ ಬ್ರಹ್ಮವ ಬೊಗಳಿದರೇನೋ
ನಾಯಿ ಜನ್ಮಕೆ ಬಿದ್ದು ಹೊರಳುವ ಮನಸೇ          || ಪ ||

ಕಾಯ ಜೀವದೊಳು ನ್ಯಾಯವ ಬೆಳೆಸಿ
ಮಾಯದೊಳಗೆ ಮುಳುಗೇಳುವ ಮನಸೇ          ||ಅ.ಪ ||

ಪರಸ್ತ್ರೀ ಪರಧನ ಪರನಿಂದ್ಯದಿ ನೀನು
ಪರಸ್ತುತಿಯಲಿ ದಿನಗಳಿಯುತ ಮನಸೇ
ವರಶಾಸ್ತ್ರಗಳೋದಿ ಅರಗಿಳಿಯಂದದಿ
ನೆರೆಸಂಸಾರ ಪಂಜರದಿ ತೊಳಲುವ ಮನಸೇ      ||೧||

ಹೊಲಸಿನ ಸುಂಬಳ ಸೇವಿಪ ನೊಣದಂತೆ
ತಿಳಿಯದೆ ವಿಷಯದಿ ಬೀಳುವಿ ಮನಸೆ
ಬಿಸಳಂಕ‌ಎಳವಿ ಶಿಸುನಾಳಧೀಶನ ಒಲಿಸದೆ
ಬಲು ಕರ್ಮವ ಗಳಿಸುವಿಯೋ ಮನಸೇ              ||೨||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

1 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ