ಬೋಧವಾದ ಮೇಲೆ ಜನರಪವಾದಕಂಜುವರೆ?

ಬೋಧವಾದ ಮೇಲೆ ಜನರಪವಾದಕಂಜುವರೆ?
ಆದಿ ಅಂತ್ಯ ಆತ್ಮ ಆತ್ಮರುಭಯ ಬೇಧವಳಿದು ಸಾಧುಯೆನಿಸಿ ||ಪ್||

ಕಾಲ ಕರ್ಮ ತುಳಿದು ತೂರ್ಯ ಜೋಲಿಯೊಳಗೆ ನುಡಿಯುತಿರಲು
ಖೂಳಜನರು ಕೇಳಿ ಸಪ್ಪ ಕೀಳೋಣಾಗದೆನುತಿರಲು           ||೧||

ಪರಮಗುರು ನಿರಾಲಹಸ್ತಾ ಶಿರದಮ್ಯಾಲ ಹರಿಯುತಿರಲು
ನರರು ತನ್ನ ಜರಿದು ಸಪ್ಪ ಹರಿಯೋಣಾಗದೆನುತಿರಲು        ||೨||

ತಂದೆ ಶಿಶುನಾಳಧೀಶನೆ ಇಂದು ಎಮಗೆ ಪಾಲಿಸೆಂದು
ಬಿಂದು ವಸ್ತು ಸವಿದು ಪರಮಾನಂದದೊಳಗೆ ಮೆರೆಯುತಿರಲು  ||೩||

                       ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ