ಸಂಸಾರದಿಂದ ಸದ್ಗತಿಹೊಂದಿ

ಸಂಸಾರದಿಂದ ಸದ್ಗತಿಹೊಂದಿ
ಹವಣವರಿತು ಮಾಯೆಯ ಜಯಸಿ
ಮರಣ ಗೆಲಿದವನೇ ಶಿವಯೋಗಿ                                 ||ಪ||

ಭವಭಾರ ಜಾಯ ಕರ್ಮಗಳನು
ಬಯಸಿ ಬ್ಯಾರೆ ಬಯಲು ಬ್ರಹ್ಮದಿ ಬೆರೆತು
ಬ್ರಹ್ಮಜ್ಞಾನ ದೊರೆವುತನಕ
ತ್ರಿನಯನ ಆಶ್ರಯ ಹಿಡಿದು
ಆವುದನರಿಯದೆ ಮುನ್ನಾ
ಆನುವರಿತು ಸವಿಗರಿದು
ಸಕಲ ವಿಷಯಗಳನ್ನು ನಿರಾಕರಿಸಿ
ಜಪವ ಕೈಯೊಳು ಸಿಗದೆ ನಡೆದವೆನೇ ಶಿವಯೋಗಿ          ||೧||

ನಿತ್ಯ ಮಾಡುವ ಕೆಟ್ಟ
ಕೃತ್ಯ ಕಾರಣಕ್ಕೆ ಸಾಕ್ಷಿ
ಹತ್ತು ಇಂದ್ರಿಯ ಮನಸ್ಸು ಹರಿದು
ಚಿತ್ತಮದ ಮತ್ಸರಕೆ
ಮತ್ತೆ ಅಸ್ಥಿರದ ಘಟದ ಚೇಷ್ಟೆಯನು
ಹೊತ್ತುಕೊಂಡು ಚಿತ್ರಗುಪ್ತರ ಲೆಖ್ಖದೊಳು ಬೆರೆಸಿಹುದಾಗಿ ||೨||

ಹಿಂದೆ ಮಾಡಿದ ಪುಣ್ಯದಿಂದ
ಪೊಡವಿಸ್ಥಲಕೆ ಬಂದು
ಶಿಶುನಾಳಗ್ರಾಮದಿ ನಿಂದು
ದಿನಗಳಿದು ದಂದುಗಕ್ಕೆ ದಣಿದು
ಸುಂದರ ಶರೀರದೊಳು ಸೇರಿ
ಚಂದದಲಿ ಮೆರೆದನು ಆನಂದಭೋಗಿ                         ||೩||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ