ಯೊಗಮುದ್ರಿ ಬಲಿದವನೆಂಬೋ

ಯೊಗಮುದ್ರಿ ಬಲಿದವನೆಂಬೋ
ಅಗ ಮೂಲದಿ ನಿನಗೆ
ಭೋಗ ವಿಷಯ ಲಂಪಟಂಗಳನರಿಯದೆ
ಲಾಗವನರಿಯದೆ ಹೀಗಾಗುವರೆ        ||೧||

ವಿಷಯದೊಳಗ ಮನಸನಿಟ್ಟು
ಹುಸಿಯ ಬಿಳುವರೇನೋ ಮರುಳೆ
ಅಸಮ ತೇಜವನು ತನ್ನೊಳು ಕಾಣುತ
ಶಶಿಕಿರಣದ ರಸವನರಿಯದೆ            ||೨||

ಬಗಿದುನೋಡಿ ಬ್ರಹ್ಮಜ್ಞಾನ
ಸಿಗದೆ ಮಿಡುಕುವರೇನೋ ಮರುಳೆ
ಜಿಗಿಯಲಜಾಂಡಕೆ ಝಗ ಝಗಿಸುವೆ ನೀ
ಜಿಗಹಳ್ಳಿಗೆ ಶಿಶುನಾಳಧೀಶ ನೀವು     ||೩||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ