ಹೊತ್ತುಗಳಿಯದಿರೆಲೋ ಮನವೆ

ಹೊತ್ತುಗಳಿಯದಿರೆಲೋ ಮನವೆ          ||ಪ||

ಗೊತ್ತು ಇಲ್ಲ ನೀನು ಬರಿದೆ
ಚಿತ್ತಚಂಚಲನಾಗಿ ಚರಿಸ್ಯಾಡುತ್ತ
ನಾನಾ ವಿಷಯಗಳನು ಹೊತ್ತು ಶ್ರಮದೊಳಾಡಬೇಡ  ||ಅ.ಪ.||

ವ್ಯರ್ಥಒಂದಿನವಾಗಿ ತೊಲಗಿದಿ
ಅತ್ತುಅಬಿ ಯಮನ ದೂತರೊಯ್ಯೆ
ಚಿತ್ರಗುಪ್ತರು ಲೆಖ್ಖ ತೋರಿಸಿ
ಲತ್ತಿಯನ್ನು ಹಾಕುತಿಹರೋ                       ||೧||

ನಾನಾ ಜನ್ಮಗಳನ್ನು ತಿರುಗಿ
ನಾನಾ ಯೋನಿಗಳಲ್ಲಿ ಜನಿಸಿ
ನಾನಾ ಕುಲದ ಹೆಸರು ಹೇಳಿ
ಹಾನಿ ಹೊಂದಿದರೇನು ಪಳವು                   ||೨||

ಪೊಡವಿಯಲ್ಲಿ ಸುಖ ಸೌಭಾಗ್ಯ
ಮಡುವಿನಲ್ಲಿ ತೇಲಿ
ಒಡಿಯ ಶಿಶುನಾಳೇಶನಡಿಯ
ಬಿಡದೆ ಧ್ಯಾನ ಮಾಡುತಿರ್ದು                     ||೩||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ