ಸದ್ಗುರುವಿನ ವರವು ನಮಗೆ ಇರಲಿ

ಸದ್ಗುರುವಿನ ವರವು ನಮಗೆ ಇರಲಿ
ಸರಸಿಜ ಮುಖಿಯೆ                        ||ಪ||

ಪರಮ ನಿತ್ಯಾನಂದ ಸುಖವು
ಆರವು ಹಿಡಿದು ನುಡಿಯುತಿರಲು
ಸ್ಮರನ ಮತ್ಸರವನ್ನು ಗೆದ್ದು
ಮರಣ ಬಾಧೆ ಮಾಯೆ ತುಳಿದು       ||೧||

ದೇವ ಶಿಶುನಾಳಧೀಶನ
ಜೀವ ದಣಿದು ಉಸುರಿದ೦ತೆ
ಕೇವಲಾದ ಬ್ರಹ್ಮ ತಾನು
ಠಾವಿನೊಳಗೆ ನಿಂತ ಬಳಿಕ             ||೨||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ