ಪ್ರಾಯ ಹೋಗುತ ಬಂತು

ಪ್ರಾಯ ಹೋಗುತ ಬಂತು ದೇಹ ಒಣಗಿ ನಿಂತು
ಜೀವದ ಬಡಿವಾರವೇನೆಂಬೆ                          ||ಪ||

ಕೋವಿಧನಾದರೆ ಸಾವಿಗಂಜದೆ ಆ
ಮಹಾದೇವರ ನುತಿಸಲೆಂಬೆ                        || ೧ ||

ಆಸ್ತಿ ಚರ್ಮದ ಘಟವಿಸ್ತರಣದಲಿ ಕೂಟ
ಮಸ್ತಕ ಮನ ಬುದ್ಧಿಯೆಂತೆಂಬೆ                     || ೨ ||

ಮಸ್ತಿ ಮಸ್ತಕರ ಕಾಮ ರಸ್ತೆಯೊಳಿರುವಂತೆ
ಆಸ್ಥಿರ ಮಾತಿದು ಮೊದಲು ಕಾಂಬೆ               || ೩ ||

ಶಿಶುನಾಳೇಶನ ಎಸವ ಪಾದಕ ನೀನು
ಮುಸುಗು ತೆಗದು ಪೂಜಿಪೊಡಲೇನೆಂಬೆ        || ೪ ||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ