ಗುರುನಾಥಾ ರಕ್ಷಿಸೋ

-ಶಿಶುನಾಳ ಶರೀಫ್

ಗುರುನಾಥಾ ರಕ್ಷಿಸೋ ಹೇ
ಕರುಣಾಸಾಗರಾ                                             ||ಪ||

ನರಜೀವಿಗೆ ಈ ದುರಿತ ಭವದ ಭಯ
ಪರಿಹರಿಸೆನುತಲಿ ಮರೆಹೊಕ್ಕೆನು                        ||೧||

ಪಾಪಾಂಬುಧಿಯನು ಪಾರುಮಾಡೆನುತಲಿ
ಶ್ರೀಪಾದಾಂಬುಜ ನಂಬಿಕೊಂಡೆ ಪರಮಾತ್ಮಾ        ||೨||

ವಸುಧಿಯೊಳು ಶಿಶುನಾಳಧೀಶನ ಸೇವಕನ
ವ್ಯಸನಗಳಿದು ಸಂತೋಷದಿ ಸಲಹೋ                  ||೩||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ