ಗುರುವೆ ಬಿನ್ನಪವುದ್ಧರಿಸೋ

ಗುರುವೆ ಬಿನ್ನಪವುದ್ಧರಿಸೋ ಎನ್ನ
ಪರಮ ಸಖನ ಜ್ಜರದುರಿ ಪರಿಹರಿಸೋ              || ಪ ||

ಇರುತಿರೆ ಆತನ ಘಟಕೆ ರೋಗಬರುವುದಿನ್ನ್ಯಾಕೆ
ಮರಗುವ ಸಂಕಟವ್ಯಾಕೆ
ಮರೆಹೊಕ್ಕೆ ನಿನ್ನಯ ಪದಕೆ
ನಿಮ್ಮ ಸ್ಮರಿಸಲು ಈ ಕರ್ಮ ಸಂಕಟವ್ಯಾಕೆ         || ೧ ||

ದೇಹವೆರಡಾತ್ಮ ಒಂದಾಗಿ
ನಾವು ತಾವು ಗುರುಸೇವೆಗೆ ಆನುಕೂಲವಾಗಿ
ಭವದ ಲಂಪಟ ಕರ್ಮನೀಗಿ
ನಿತ್ಯ ಶಿವಧ್ಯಾನದೊಳು ನಾವು ಇರುತಿರಲಾಗಿ     || ೨ ||

ಬೇಡಿಕೊಂಬುವೆ ಭಕ್ತಿಗಾಗಿ
ದಯಮಾಡಿ ರಕ್ಷಿಸಬೇಕು ಕಲ್ಮಷ ನೀಗಿ
ನೋಡಿ ಕಡಿಯೋ ಭವಬಂದಾ
ರೂಡಿಪ ಶಿಶುನಾಳಧೀಶನ ಕಂದಾ                   || ೩ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ