ಪಾದ ಪೂಜೆಯಾದುದೇನಿದು ಪ್ರಭುವರನ ಕಾಣದೆ

-ಶಿಶುನಾಳ ಶರೀಫ್

ಪಾದ ಪೂಜೆಯಾದುದೇನಿದು
ಪ್ರಭುವರನ ಕಾಣದೆ                                                             || ಪ ||

ಮೇಧಿನಿಯೊಳು ಸಂಶಿಯ ಜನ
ವಿನೋದದಿಂದು ಮಾಡಿದಂಥಾ                                               || ಅ. ಪ. ||

ಧರಿಗೆ ಸಂಶಿ ಮರೆವ ಮೋಜಿನ ಪರಿ
ಬ್ಯಾರೆ ಪ್ಯಾಕಿ ಮಳಗಿ ಸಾಲ್ಗಳೆರದು ಬಾಜಿನ
ನೆರೆ ಶುಭದಿ ಅದರೊಳಗಿರುವರೈ ಆನೇಕ-
ತರ ಜನ ಸರಿಗಾಣೆ ನಾ
ಪಿರಿದು ಕಾಂಬುದುದೀಗ ಬಾಗ್ಯ
ಸಿರಿಗೆ ಸಿಲ್ಕಿ ಶಿವನ ಚರಣ
ಮರೆತು ಮಾಯೆಯೊಳಿರಲು ಪುರಕೆ
ಪರಮಗುರು ನಿರಾಲ ಬಾರದೆ                                                  ||೧||

ಭೂಮಿಯೊಳು ನಿಸ್ಸೀಮಪ್ರೌಢರು ಈ
ಗ್ರಾಮದೊಳು ಧಾಮ ಶಾನುಭೋಗ ಗೌಡರು ಬಹು
ನಾಮವಿಡಿದು ಪಣಿ ಜನರು ಸು-
ಪ್ರೇಮ ರೈತರು ಸಮಸ್ತರು
ಕಾಮಿತಾರ್ಥ ಫಲವ ಬೇಡಿ
ನೇಮ ಹಿಡಿದು ನಿಜಕೆ ನಿಲುಕುತೆ
ಎಮಗೆ ವಿಚಿತ್ತ ಗಣಸಮೂಹ ನೆರಪಿ ಸ್ವಾಮಿ ಇಲ್ಲದೆ                      ||೨||

ಜಗದೊಳಗಿದು ಮಿಗಿಲುವಾಗಿರೆ
ಈಗಳಿದು ಇಂದ್ರನಗರ ಪೊಲ್ವ್ಶೋಭನಾಗಿರೆ
ಬಗೆವಡಿದು ಸೌಖ್ಯ ಸೊಗಸಿನಿಂದ
ನಗುವಳಿಂದಕಿ ಹೀಗಿರುತಿರೆ
ಪೊಗಲ್ವನಂತಸ್ಥಲವ ಕಂಡನಂತಾಪುರದ ಒಡಿಯರುಗಳು
ನೆಗಪಿಸಿದ ಪುರಾತ ಶಿವಗೆ
ಅಘಹರನಂ ಸಿಗದ ಬಳಿಕ                                                      ||೩||

ಊರ ಹೊರಗೆ ಉತ್ರ ದಿಸೆಯೊಳು ನಿರ್ಮಿಸಿದ ಮೂಲ
ಚಾರುತರದ ಚೌಕಬಾಗಿಲೊಳು ಈರೈದುದ್ವಾರ
ಸಾರುಗಟ್ಟಿದ ಮಂಟಪಗಳೊಳ್ ನಿರ್ಬಯಲಿನಲ್ಲಿ
ಆರು ಮೂರು ಹಾದಿ ಮೀರಿ ವೀರಸಿಂಹಾಸನವನೇರಿ
ಮಾರಹರನ ಮಂತ್ರಜಪಿಸಿ ಮಾಯಾಭಂಗ ಮಾಡೋತನಕಾ         ||೪||

ಮಂಡಲಾಗ್ರ ಮಧ್ಯನಾಡಿನೊಳ್ ಮಾಡಿಸಿದಮೋಹ
ಖಂಡಿಗನ್ನ ದಾನ ವಸ್ತ್ರಗಳ್ ಕೊಂಡಿಟ್ಟು ಚೌಕು
ಭಾಂಡ ಜೀನಸನ್ನು ಬಟ್ಟಲೊಳು ಕೊಡುತ್ತಿರಲು ಕೇಳಿ
ಉಂಡು ಉಣ್ಣಲಾರದೆ ಜಂಗಮರ್‍ಹಿಂಡುಗಟ್ಟಿ ತಿರುರುಗುತಿರ್ದ
ಪುಂಡಶಿಶುನಾಳಧೀಶನ ಕಂಡು ಕೈಮುಗಿಯುವತನಕಾ                 ||೫||

              ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ