ಮುತ್ತು ರನ್ನದ ಕಿಡಿ ಉದುರೀತು

- ಶಿಶುನಾಳ ಶರೀಫ್

ಮುತ್ತು ರನ್ನದ ಕಿಡಿ ಉದುರೀತು
ಕಡು ವಿಷಯ ಹಿಂದಿನ ಪಾಪ ಬಂದು ಮಂದೆ ನಿಂತೀತು                || ಪ ||

ಆಪ್ಪ ಆಣ್ಣಗಳೆಲ್ಲ ಕೇಳಿರಿ ತಪ್ಪಲಾರದು ಕರ್ಮದೋಷವು
ಒಪ್ಪುವಂಥಾ ಘಟವು ಬಿಟ್ಟು ಕ್ಷಣದಲಿ ಆಸು ಹಾರಿಹೋಯಿತು         ||ಆ.ಪ.||

ದೇಶಕಧಿಕವಾದ ಹುಬ್ಬಳ್ಳಿ ಹುಚ್ಚಯ್ಯಸ್ವಾಮಿ
ಮಠದ ಪಟ್ಟದ ಚರಮೂರ್ತಿ ಆವರ ಕೀರ್ತಿ ಸಾರಿ ಸದ್ಭಕ್ತರಿಗೆ
ದುಃಖವು ಗಾರಗೊಂಡಿತು ಮನದ ಕೊನೆಯೊಳು
ಆರು ಮಾಡುವರೇನು ಇದಕೆ ಹುಟ್ಟಸಿದ ಶಿವ ತಾನೇ ಬಲ್ಲಾ           || ೧ ||

ಏನು ಎಷ್ಟಿದರೊಳು ಎಷ್ಟು ದಿವಸ ಇದ್ದರೆ ಸಾವು ತಪ್ಪದು
ಮೃತ್ಯುಬುದ್ಧಿಯನ್ನು ಬಲ್ಲವರೊಳು ಕೇಳು
ಆಲ್ಲಮ ಮಹಾಪ್ರಭುವಿನ ಸಿರಿಯು ತುಂಬಿ
ಯೋಗಮಂದಿರದೊಳು ಬೆಳಗುವ ಕಳಿವುಳ್ಳ ಬಸವಾದಿ ಪ್ರಮಥರು || ೨ ||

ಕಾಶೀ ಗ್ರಾಮದ ಪುಣ್ಯ ತೀರಿತು ಬೈಲಾಯಿತು
ಬೈಲಿನೊಳಗೆ ಬೈಲು ಆಯಿತು ಕಡಿಗೆ ಆಯಿತು
ಒಡಿಯ ಶಿಶುನಾಳ ಈಶನಡಿಗೆ ಬಿಡದೆ ಭಜಿಸುವ ನಿಮ್ಮ ಧ್ಯಾನದಿ
ನುಡಿದ ಮಾತಿಗೆ ಕಸರು ಇದ್ದರೆ ತಿದ್ದಿ ಹೇಳಿರಿ ರಸಿಕರೆಲ್ಲಾ             || ೩ ||

        ***

ಕೀಲಿಕರಣ: ಎಂ.ಎನ್.ಎಸ್.ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ