ಪೀಠಿಕೆ

- ಗಿರಿಜಾಪತಿ ಎಂ. ಎನ್

ನಿನಗು ನನಗು ನೆಲ-ಮುಗಿಲಿನಂತರ
ವೆಂದನಲ್ಲನ ಮೊಗದಲಿ.....
ಮೊಗವಿಟ್ಟು ನುಡಿದಳು
ಇನಿದು ದನಿಯಲಿ..
ನಿಜದ ಬದುಕಿದೆ ನೆಲದಲಿ

ಭರದಿ ಸುರಿವಾ ಮಳೆಯಬ್ಬರ
ಸುವ ಕೋಪದುರಿಯ ನೇಸರ.....
ಗೊತ್ತು-ಗುರಿಯು ಇಲ್ಲದಲೆಯೋ.....
ಬೀಸುಗಾಳಿಯ ಬರ್ಬರ
ಎಲ್ಲ ಕಂಡು, ಎಲ್ಲ ಉಂಡು.....
ಬಸಿರ ಜೀವಕೆ ಬಾಳ ಬೆಸೆವಾ.....
ಇಳೆಯೇ ಜೀವಕೆ ಕಂಗಳು.....

ಇಂದು-ನಾಳೆಗೆ ನಾಳೆ-ಮುಂದಕೆ
ಕಣ್ಣ ಕನಸಿನ ಪೀಠಿಕೆ
ಬರುವುದೆಲ್ಲವ ಬರಸೆಳೆದು ಒಪ್ಪುತೆ
ಮಣ್ಣ ಹಾಡಿನ ಚರಣಕೆ
ಎಲ್ಲ ನಮ್ಮದು, ಎಲ್ಲೆ ಮೀರದು
ಉಸಿರುಸಿರ ಹಸಿರನಲಿ
ಸ್ಪುರಿಸೋ ಭಾವಕೆ ಪಥಗಳು.....

        *****

ಕೀಲಿಕರಣ: ಕಿಶೋರ್‍ ಚಂದ್ರ

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ