ದಿನಮಾನ ಬಲು ಕೆಟ್ಟವೋ

- ಶಿಶುನಾಳ ಶರೀಫ್

ದಿನಮಾನ ಬಲು ಕೆಟ್ಟವೋ  ಸದ್ಗುರುಪುತ್ರ
ನಿನಗಾವು ಬಂದು ತಟ್ಟವೋ               ||ಪ||

ಚಿನುಮಯಾತ್ಮಕವಾದ ಐದಕ್ಷರವು
ತನ್ನೊಳು ಜಪಿಸಿಕೊಂಡಿಹ
ಮನುಜರೂಪವ ಕಳೆದು ಮಹಿಮೆಯ
ತಿಳಿದ ಪುರುಷನಿಗೇನು  ಆಗದು          ||ಅ.ಪ||

ದೇಹದೊಳಿದ್ದರೇನು ಜೀವನ ಕಾಯ
ಲೋಹಕೆ ಬಿದ್ದರೇನು
ಸಾವುನೋವಿನ ಭಾವ ತಿಳಿಯದೆ
ಜಾವಕೊಮ್ಮೆ ಓಂ ನಮಃ  ಶಿವಾಯೆಂದು
ಭಾವದಲಿ ನುಡಿಯೇ ಕಲಿಕರ್ಮದೊಳು ಮಹ-
ದೇವ ಮೆಚ್ಚುವ  ಸತ್ಯ ಮಾತಿದು           ||೧||

ವಿಷಯವಾಡಿದರೇನಾಯ್ತು   ಈ  ಲೋಕವು
ಹುಸಿಯನ್ನುವುದೇ  ಗೊತ್ತು
ವಸುಧಿಯೊಳು ಶಿಶುನಾಳಧೀಶನ
ಎಸೆವ ಸೇವಕನಾಗಿ  ಜಗದಿ
ಮಸಿದ ಪ್ರಣವಶಸ್ತ್ರ   ಕೈಯೊಳು
ಕೊಸರದಂದದಿ  ಹಿಡದು ನುಡಿಯಲು       ||೨||

        *****

ಕೀಲಿಕರಣ: ಎಮ್.ಎನ್.ಎಸ್.ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ