ಕರುನಾಡು

- ರವಿ ಕೋಟಾರಗಸ್ತಿ

ಕನ್ನಡವೇ.. ನನ್ನ ಉಸಿರು
ಕನ್ನಡವೇ.. ನಮ್ಮ ಹಸಿರು

ಕನ್ನಡದಿ ನಾವುಗಳು
ಏಳ್ಗೆಯನು ಸಾಧಿಸಲು
ಜೀವನವು ಸಾರ್ಥಕವು

ಕನ್ನಡದ ಭೂಮಿಯಲಿ
ಅನ್ನ, ನೀರು, ಕನ್ನಡವಾಗಿಸಿ
ಬೆಳೆದು ಬಾಳುತಿರುವ ಕನ್ನಡಿಗರು

ಪ್ರಾಣವನು ನೀಡಿಯಾದರೂ
ಉಳಿಸಬೇಕು ಕನ್ನಡವಾ...
ಜೀವನ ತೊರೆದಾದರೂ
ಬೆಳೆಸಬೇಕು ಕನ್ನಡವ...

ಕನ್ನಡ ಮಂತ್ರವರಿಯದೇ
ನಾವಾಗಲಾರೆವು
ಕರುನಾಡಿನ ಕಲಿಗಳು...
ಉಳಿಸಲಾರೆವು ನಾಡು-ನುಡಿ ಸಂಸ್ಕೃತಿಯ
ಈ ಸತ್ಯ ಅರಿತಾಗಲೆ...
ಈ ನಾಡು ಕರುನಾಡು

         ***

ಕೀಲಿಕರಣ: ಕಿಶೋರ್‍ ಚಂದ್ರ

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ