ಮಲಪ್ರಭೆ

-ರವಿ ಕೋಟಾರಗಸ್ತಿ

ಹಸಿರು ತುಂಬಿದ ವನಸಿರಿಯು
ಚೆಲುವು ಧರೆಯ ಶೃಂಗರಿಸಿಹದು
ಗಿರಿಕಾನನಗಳ ಮೆರಗು
ರಂಗುಸಿರಿಯು ಹೆಚ್ಚಿಹದು

ಮೋಡಗಳಿಗೆ ಮುತ್ತಿಡುತ
ಧರೆಗೆ ಜಲಧಾರೆ ಚೆಲ್ಲುತಲಿ
ರೈತನ ಸಂತಸ ಹೆಚ್ಚಿಸುತ
ನೊಂದ-ಬೆಂದ ಜನಗಳಿಗೆ
ನೀ ಧಾಮ ಕಾಮಧೇನು

ನಿನ್ನಡಿಯಲಿ ಕುಣಿಯುತಿಹಳು
ಮಹಾತಾಯಿ ಮಲಪ್ರಭೆ
ಭೋರ್ಗರೆಯುತ ರಭಸದಿ
ಗಿರಿ ಬೆಟ್ಟ ತಿರುವುಗಳಲಿ
ಕರುನಾಡನು ಸಿರಿಗೊಳಿಸುತ

ಆ ಹಸಿರ ಮಡಿಲ
ಒಲವಿನ ಒಡಲು
ಹಕ್ಕಿಗಳ ಮುರಳಿನಾದವು
ಕಾಡೆಲ್ಲಾ ಝೇಂಕರಿಸುತಿಹದು
ನಿರ್ಭಯದಿ ನಿಸರ್ಗ ಭೂಮಡಿಲು
ಸ್ವರ್ಗಕ್ಕಿಂತಲೂ... ಮಿಗಿಲು

         *****

ಕೀಲಿಕರಣ: ಕಿಶೋರ್‍ ಚಂದ್ರ

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ