ಇದುವೆ ನನ್ನಯ ಸೇವೆ

- ಅನಂತನಾರಾಯಣ ಎಸ್

ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು
ನೋಡಿದೆನು ಆಸೆಯಿಂ ಅಲೆಗಳೆಡೆಗೆ
ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ
ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು!

ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ,
ನೋಡುತಲೆ ಧೀಗೆಟ್ಟೆ ರೌದ್ರರೂಪ!
ಸಾಗರದಿ ಮುಳುಗುತ್ತ ಮುತ್ತು ರತ್ನವನಾಯೆ
ಧೈರ್ಯಸಾಲದೆ ಅಂತೆ ನಿಂತ ಭ್ರಮೆಯೊಳಗೆ!

ಎದೆಯ ಕಂಬನಿ ಸುರಿಸಿ, ದಡದಿ ಮರಳಿನ ಮೇಲೆ
ಬಿದ್ದಿರುವ ಚಿಪ್ಪುಗಳನಾಯ್ದು ತಂದು
ಅಮ್ಮನಡಿಗಳಲಿಡುವೆ!  ಇದುವೆ ನನ್ನಯ ಸೇವೆ!
ತಪ್ಪುನಡೆದರು ಅಪ್ಪಿ ಮುದ್ದಿಪುದು ಮಮತೆ!
     *****
ಕೀಲಿಕರಣ: ಕಿಶೋರ್‍ ಚಂದ್ರ

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ